ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್, ಬೆಳಗಾವಿ ಮುದ್ರಣ ಮಾದ್ಯಮ ಪತ್ರಕರ್ತರ ಸಂಘದ  ಪದಾಧಿಕಾರಿಗಳಿಂದ ಸಚಿವ ಸತೀಶ್ ಜಾರಕಿಹೊಳಿಗೆ ಸನ್ಮಾನ

ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್, ಬೆಳಗಾವಿ ಮುದ್ರಣ ಮಾದ್ಯಮ ಪತ್ರಕರ್ತರ ಸಂಘದ  ಪದಾಧಿಕಾರಿಗಳಿಂದ ಸಚಿವ ಸತೀಶ್ ಜಾರಕಿಹೊಳಿಗೆ ಸನ್ಮಾನ

 

“ಬೆಳಗಾವಿ:  ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸಮಸ್ತ ಪತ್ರಕರ್ತರ ಬಳದಿಂದ ಸನ್ಮಾನಿಸಲಾಯಿತು.

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್, ಬೆಳಗಾವಿ ಮುದ್ರಣ ಮಾದ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಪತ್ರಕರ್ತರು ಸಚಿವರನ್ನ ಬೆಳಗಾವಿ ಕಾಂಗ್ರೆಸ್‌ ಕಚೇರಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿದರು.

ಸನ್ಮಾನದ ವೇಳೆ ಹಿರಿಯ ಪತ್ರಕರ್ತರಾದ ನೌಷಾಧ ಬಿಜಾಪುರ, ರಾಜು ಗೌಳಿ, ಶ್ರೀಶೈಲ್ ಮಠದ, ಮಂಜುನಾಥ ಪಾಟೀಲ್‌, ಶ್ರೀಕಾಂತ ಕುಬಕಡ್ಡಿ, ಚಂದ್ರಕಾಂತ ಸುಗಂಧಿ, ಅನೀಲ ಕಾಜಗಾರ, ಶ್ರೀಧರ ಕೋಟಾರಗಸ್ತಿ, ಮೈಲಾರಿ ಪಠಾತ್‌, ಅಡವೆಪ್ಪ ಪಾಟೀಲ್, ಮೈಬೂಬ್ ಮಕನದಾರ, ಇಮಾಮ್ ಗೋಡೆರ್ಕ, ಸಿದ್ಧನಗೌಡ ಪಾಟೀಲ್‌, ಸುನೀಲ್‌ ಪಾಟೀಲ್‌, ಮುನ್ನಾ ಬಾಗವಾನ ಸೇರಿ ಹಲವು ಪತ್ರಕರ್ತರು ಉಪಸ್ಥಿತರಿದ್ದರು.