ಚಾರಣ ಘಾಟ್‌ ನೋಡಲು ಹೋಗಿ ನಾಪತ್ತೆಯಾದ 9 ಜನ ವಿದ್ಯಾರ್ಥಿಗಳ ರಕ್ಷಣೆ

ಚಾರಣ ಘಾಟ್‌ ನೋಡಲು ಹೋಗಿ ನಾಪತ್ತೆಯಾದ 9 ಜನ ವಿದ್ಯಾರ್ಥಿಗಳ ರಕ್ಷಣೆ

 

ಬೆಳಗಾವಿ: ಚಾರಣ ಘಾಟ್‌ ನೋಡಲು ಹೋಗಿ ಕಾಡಿನಲ್ಲಿ ನಾಪತ್ತೆಯಾದ 9 ಜನ ವಿದ್ಯಾರ್ಥಿಗಳು ರಕ್ಷಿಸುವಲ್ಲಿ ಕರ್ನಾಟಕ ಹಾಗೂ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಜಲ್ವಾಣಿ ಫಾಲ್ಸ್ ನೋಡುವ ಸಲುವಾಗಿ ಕಣಕುಂಬಿ ಅರಣ್ಯ ಪ್ರದೇಶದ ಮೂಲಕ ತೆರಳಿದ್ದರು.

ಈ ಯುವಕರು ಪಾರವಾಡ ಗ್ರಾಮದಿಂದ ಮೂರು ಕಿಲೋಮೀಟರ್ ಬೈಕ್‌ನಲ್ಲಿ ತೆರಳಿದ್ದು, ಬಳಿಕ ಕಾಲು ದಾರಿಯಲ್ಲೇ ಜಲ್ವಾಣಿ ಫಾಲ್ಸ್‌ಗೆ ತೆರಳಿ ಎಂಜಾಯ್ ಮಾಡಿದ್ದರು. ಮರಳಿ ಬರುವಾಗ ದಾರಿಯ ಕುರುವು ಸಿಕ್ಕಿಲ್ಲ, ತಕ್ಷಣವೇ ಯುವಕರು ಸ್ನೇಹಿತರಿಗೆ ಫೋನ್ ಮಾಡಿ ಕಾಡಿನಲ್ಲಿ ಕಣ್ಮರೆಯಾಗಿರುವ ಕುರಿತು ಮಾಹಿತಿ ರವಾನಿಸಿದ್ದಾರೆ.

ಕರ್ನಾಟಕ ಹಾಗೂ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕಾಡಿನಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ.